ADVERTISEMENT

ಕಾಶ್ಮೀರ ಸಮಸ್ಯೆ ಕುರಿತು ಮಾತುಕತೆಗೆ ಸಿದ್ಧ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 19:30 IST
Last Updated 21 ಸೆಪ್ಟೆಂಬರ್ 2017, 19:30 IST

ಶ್ರೀನಗರ: ಕಾಶ್ಮೀರ ಸಮಸ್ಯೆ ಬಗ್ಗೆ ಪ್ರತ್ಯೇಕತಾವಾದಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರ ಜತೆ ಬೇಷರತ್ತಾಗಿ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ತಿಳಿಸಿದ್ದಾರೆ.

ಸಮಸ್ಯೆ ಪರಿಹಾರ ಸಂಬಂಧ ಕೇಂದ್ರ ಅಥವಾ ರಾಜ್ಯ ಸರ್ಕಾರದ ಜತೆ ಮಾತುಕತೆಗೆ ಮುಂದಾಗುವವರನ್ನು ಸ್ವಾಗತಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಪಕ್ಷದ ಕಾರ್ಯಕ್ರಮಗಳ ನಿಮಿತ್ತ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಮಾಧವ್‌ ಅವರು, ಕಾಶ್ಮೀರದಲ್ಲಿ ಶೀಘ್ರದಲ್ಲಿಯೇ ಶಾಂತಿ ಮರಳಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.