ಲಖನೌ: ಬನಾರಸ್ ಹಿಂದು ವಿಶ್ವವಿದ್ಯಾಲಯದ ಆವರಣದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ ವಿದ್ಯಾರ್ಥಿನಿಯರು ಶುಕ್ರವಾರ ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದರು.
ಕಿರುಕುಳ ಪ್ರಕರಣ ಕುರಿತು ದೂರು ಸಲ್ಲಿಸಿದ್ದಕ್ಕಾಗಿ ವಿದ್ಯಾರ್ಥಿನಿಯರಿಗೆ ಸಂಜೆ ಆರು ಗಂಟೆ ಬಳಿಕ ಹಾಸ್ಟೆಲ್ನಿಂದ ಹೊರಬರದಂತೆ ಅಧಿಕಾರಿಗಳು ಸಲಹೆ ನೀಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ವಾರಾಣಸಿಗೆ ಬರುವ ಕೆಲವೇ ತಾಸುಗಳ ಮೊದಲಷ್ಟೇ ಈ ಪ್ರತಿಭಟನೆ ನಡೆದಿದ್ದು ಅಧಿಕಾರಿಗಳಲ್ಲಿ ಕೊಂಚ ಆತಂಕ ಮೂಡಿಸಿತ್ತು.
ಕಲಾ ವಿಭಾಗದ ವಿದ್ಯಾರ್ಥಿನಿ ಗುರುವಾರ ಸಂಜೆ ತರಗತಿಯಿಂದ ಹಾಸ್ಟೆಲ್ಗೆ ತೆರಳುವ ವೇಳೆ ಮೂವರು ಯುವಕರು ಕಿರುಕುಳ ನೀಡಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ಅಧಿಕಾರಿಗೆ ದೂರು ನೀಡಿದ್ದಳು. ಆದರೆ ಪ್ರಧಾನಿ ನಗರಕ್ಕೆ ಭೇಟಿ ನೀಡುವ ಕಾರ್ಯಕ್ರಮ ಇದ್ದುದರಿಂದ ಈ ವಿಷಯ ‘ಮರೆಯಬೇಕು’ ಎಂದು ಅವರು ಹೇಳಿದ್ದರು ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.