ADVERTISEMENT

ಕೆ.ಚಂದ್ರಶೇಖರರಾವ್‌ ತೆಲಂಗಾಣ ಸಿಎಂ

​ಪ್ರಜಾವಾಣಿ ವಾರ್ತೆ
Published 2 ಜೂನ್ 2014, 9:08 IST
Last Updated 2 ಜೂನ್ 2014, 9:08 IST

ಹೈದರಾಬಾದ್‌ (ಪಿಟಿಐ): ನೂತನ ರಾಜ್ಯವಾಗಿ ಉದಯವಾದ ತೆಲಂಗಾಣದ ಮೊದಲ ಮುಖ್ಯಮಂತ್ರಿಯಾಗಿ ಕೆ.ಚಂದ್ರಶೇಖರರಾವ್‌ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಇ.ಎಸ್‌.ಎಲ್‌.ನರಸಿಂಹನ್‌ ಅವರು  ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಜೊತೆಯಲ್ಲಿ 17 ಜನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.

60 ವರ್ಷ ವಯಸ್ಸಿನ ಚಂದ್ರಶೇಖರ್‌ ರಾವ್‌ ಅವರು ಹಲವು ದಶಕಗಳಿಂದ ತೆಲಂಗಾಣ ರಾಜ್ಯಕ್ಕಾಗಿ ಹೋರಾಟ ನಡೆಸಿದ್ದರು. ರಾಜ್ಯದ 29ನೇ ಜಿಲ್ಲೆಯಾಗಿ ತೆಲಂಗಾಣ ಅಸ್ತಿತ್ವಕ್ಕೆ ಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT