ADVERTISEMENT

ಕೇಜ್ರಿವಾಲ್ ಮೇಲೆ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2014, 10:45 IST
Last Updated 18 ಏಪ್ರಿಲ್ 2014, 10:45 IST

ವಾರಾಣಸಿ(ಐಎಎನ್ ಎಸ್): ವಾರಾಣಸಿಯಲ್ಲಿರುವ ಹಿಂದೂ ವಿಶ್ವವಿದ್ಯಾನಿಲಯದ ಆವರಣದಲ್ಲಿ ಯುವಕರ ಗುಂಪೊಂದು ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಎಂಬ ಘೋಷಣೆಗಳನ್ನು ಕೂಗುತ್ತಾ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರತ್ತ ಇಟ್ಟಿಗೆ ತುಂಡು ಮತ್ತು ಕಲ್ಲುಗಳನ್ನು ತೂರಿದ ಘಟನೆ  ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ಪ್ರಸಿದ್ದ ಕೇಶವ ಪಾನ್ ಅಂಗಡಿ ಬಳಿ ಗುರುವಾರ ರಾತ್ರಿ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಈ  ದಾಳಿ ನಡೆಸಲಾಗಿದೆ.

ಈ ಘಟನೆ ಸಂಬಂಧ ವಾರಾಣಸಿ ಪೊಲೀಸರು ಅಪರಿಚಿತ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT