ತಿರುವನಂತಪುರ: ಕೇರಳದ ಉತ್ತರದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಬುಧವಾರ ವಿವಿಧೆಡೆ ಭೂಕುಸಿತ ಸಂಭವಿಸಿದೆ.
ವೈನಾಡ್ ಜಿಲ್ಲೆಯ ಮನಂತವಾಡಿಯಲ್ಲಿ ಬುಧವಾರ 27 ಸೆಂ.ಮೀ, ವೈತ್ರಿಯಲ್ಲಿ 14 ಸೆಂ.ಮೀ ಮಳೆಯಾಗಿದೆ. ಕಣ್ಣೂರಿನ ಹಲವೆಡೆ ಭೂಕುಸಿತ ಆಗಿದೆ. ಹಾಗೂ ಬೆಳೆಗಳಿಗೂ ಹಾನಿಯಾಗಿದೆ. ರಸ್ತೆ ಮತ್ತು ಮನೆಗಳು ಜಲಾವೃತವಾಗಿರುವುದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಳೆಗೆ ಶಾಲಾಕಟ್ಟಡವೊಂದು ಕುಸಿದು ಬಿದ್ದಿದೆ. ಹೀಗಾಗಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.