ಮುಂಬೈ: ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ, ಗಾಯಕ ಆದೀಶ್ ಶ್ರೀವಾತ್ಸವ (51) ಅವರು ಶುಕ್ರವಾರ ಮಧ್ಯರಾತ್ರಿ ಕೋಕಿಲಾಬೆನ್ ಧೀರೂಬಾಯ್ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದರು.
ಆದೀಶ್ ಅವರು ಕಳೆದ 40 ದಿನಗಳಿಂದ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗಿನ ಜಾವ 12.30 ರಲ್ಲಿ ಕ್ಯಾನ್ಸರ್ ಖಾಯಿಲೆಯಿಂದ ನಿಧನರಾದರೆಂದು ಡಾ. ರಾಮ್ ನರೇನ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.