ಶ್ರೀನಗರ : ಕುಪ್ವಾರ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಕೆರಾನ್ ವಲಯದಲ್ಲಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಯೋಧ ಹಾಗೂ ಉಗ್ರನೊಬ್ಬ ಸಾವನ್ನಪಿದ ಘಟನೆ ನಡೆದಿದೆ.
ಸಿಖ್ ಬೆಟಾಲಿಯನ್ ಯೋಧರು ಚುನ್ಕಾನ್ ಪೋಸ್ಟ್ನಲ್ಲಿ ಗಸ್ತು ತಿರುಗುತ್ತಿದ್ದಾಗ ರಾತ್ರಿ 1.45ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಎರಡು ಕಡೆಗಳಿಂದ ಗುಂಡಿನ ಚಕಮಕಿ ನಡೆದಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.
ಈ ಕುರಿತು ಮಾತನಾಡಿದ ಸೇನೆಯ ವಕ್ತಾರ ರಾಜೇಶ್ ಕಾಲಿಯಾ ಅವರು, ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಉಗ್ರರ ಯತ್ನ ವಿಫಲಗೊಳಿಸಿದ್ದು, ಉಗ್ರನೊಬ್ಬ ಹತ್ಯೆಯಾಗಿದ್ದಾನೆ. ಯೋಧ ಸಂದೀಪ್ ಸಿಂಗ್ ಸಹ ಹತರಾಗಿದ್ದಾರೆ.
ಎರಡು ದಿನಗಳ ಅಂತರದಲ್ಲಿ ಕುಪ್ವಾರ್ ಜಿಲ್ಲೆಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.