ADVERTISEMENT

ಗ್ರೆನೆಡ್ ದಾಳಿ: ಒಂಬತ್ತು ಮಂದಿ ಗಾಯ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2014, 10:22 IST
Last Updated 29 ನವೆಂಬರ್ 2014, 10:22 IST

ಶ್ರೀನಗರ(ಪಿಟಿಐ, ಐಎಎನ್ ಎಸ್): ಇಲ್ಲಿನ ಲಾಲ್ ಚೌಕದಲ್ಲಿ ಉಗ್ರರು ಶನಿವಾರ ಮಧ್ಯಾಹ್ನ ಗ್ರೆನೆಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗುರುತು ಪತ್ತೆಯಾಗದ ಉಗ್ರರು ಸಿನಿಮೀಯ ರೀತಿ ರಸ್ತೆ ಬದಿ ಗ್ರೆನೆಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್)ಯ ಸಬ್ ಇನ್ ಸ್ಪೆಕ್ಟರ್ ಸಹ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ವ್ಯಾಪಾರ ಕೇಂದ್ರದಲ್ಲಿ ಉಗ್ರರು ಪ್ರಬಲ ಗ್ರೆನೆಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಇಲ್ಲಿನ ಎಸ್ ಎಂಎ ಎಚ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಗ್ರರು ಸೇನಾ ಠಾಣೆಯನ್ನು ಹೊಡೆದುರುಳಿಸಲು ಪ್ರಬಲ ಗ್ರೆನೆಡ್ ದಾಳಿ ನಡೆಸಿದ್ದಾರೆ. ಯಾವುದೇ ಸಂಘನೆಗಳು ದಾಳಿಯ ಹೊಣೆ ಹೊತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.