ಬೆಂಗಳೂರು: ಮೇಕೆದಾಟು ಯೋಜನೆ ವಿರೋಧಿಸಿ ಶನಿವಾರ ತಮಿಳುನಾಡು ಬಂದ್ಗೆ ಕರೆ ಕೊಟ್ಟಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ತಮಿಳು ಭಾಷೆಯ ಚಲನಚಿತ್ರ ಪ್ರದರ್ಶನ ಮಾಡದಂತೆ ಮತ್ತು ತಮಿಳು ವಾಹಿನಿಗಳನ್ನು ಪ್ರಸಾರ ಮಾಡದಂತೆ ಕನ್ನಡಪರ ಸಂಘಟಣೆಗಳು ಕರೆ ನೀಡಿವೆ.
‘ಮೇಕೆದಾಟು ಯೋಜನೆಯ ವಿಚಾರದಲ್ಲಿ ತಮಿಳುನಾಡಿನ ನಿಲುವು ವಿರೋಧಿಸಿ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಯಲಲಿತಾ ಮತ್ತು ಕರುಣಾನಿಧಿ ಅವರ ಪ್ರತಿಕೃತಿಗಳನ್ನು ದಹಿಸಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದ್ದಾರೆ.
‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ವಿಳಂಬ ಮಾಡಬಾರದು’ ಎಂದು ಅವರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.