ADVERTISEMENT

ತಮಿಳು ಜನರ ಆಕಾಂಕ್ಷೆ ಈಡೇರಿಕೆಗೆ ಎಲ್ಲಾ ಬಗೆಯ ಯತ್ನ: ಮೋದಿ

ಪಿಟಿಐ
Published 21 ಜನವರಿ 2017, 6:10 IST
Last Updated 21 ಜನವರಿ 2017, 6:10 IST
ತಮಿಳು ಜನರ ಆಕಾಂಕ್ಷೆ ಈಡೇರಿಕೆಗೆ ಎಲ್ಲಾ ಬಗೆಯ ಯತ್ನ: ಮೋದಿ
ತಮಿಳು ಜನರ ಆಕಾಂಕ್ಷೆ ಈಡೇರಿಕೆಗೆ ಎಲ್ಲಾ ಬಗೆಯ ಯತ್ನ: ಮೋದಿ   

ನವದೆಹಲಿ: ತಮಿಳು ಜನರ ಸಾಂಸ್ಕೃತಿಕ ಆಕಾಂಕ್ಷೆಗಳ ಈಡೇರಿಕೆಗೆ ಎಲ್ಲಾ ಬಗೆಯ ಪ್ರಯತ್ನ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ.

ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸುವಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ನರೇಂದ್ರ ಮೋದಿ ಅವರು, ತಮಿಳುನಾಡಿನ ಸಾಂಸ್ಕೃತಿಕ ಆಚರಣೆ ಬಗ್ಗೆ ಹೆಮ್ಮೆ ಇದೆ. ಜನರ ಸಾಂಸ್ಕೃತಿಕ ಆಕಾಂಕ್ಷೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಎಲ್ಲಾ ಬಗೆಯ ಪ್ರಯತ್ನ ಮಾಡುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ತಮಿಳುನಾಡು ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.