ADVERTISEMENT

ತಾಯ್ನಾಡಿಗೆ ಮರಳಿಸಲು ಮನವಿ

ಪಿಟಿಐ
Published 22 ಜನವರಿ 2017, 19:30 IST
Last Updated 22 ಜನವರಿ 2017, 19:30 IST
ನವದೆಹಲಿ: ಕಳೆದ ಎಂಟು ತಿಂಗಳಿಗೂ ಹೆಚ್ಚು ಕಾಲದಿಂದ  ಇಲ್ಲಿಗೆ ಸಮೀಪದ ನರೇಲಾದ ಲಂಪುರದಲ್ಲಿ ಪ್ರತ್ಯೇಕವಾಗಿ ಬಂಧನದಲ್ಲಿರುವ (ಸ್ಥಾನಬದ್ಧತಾ ಕೇಂದ್ರ) 85 ವರ್ಷದ ಪಾಕಿಸ್ತಾನ ಪ್ರಜೆ ಯೊಬ್ಬರು ತನ್ನನ್ನು ಮರಳಿ ತಾಯ್ನಾಡಿಗೆ ಕಳುಹಿಸಲು ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. 
 
ಮಾದಕ ವಸ್ತು ಕಳ್ಳಸಾಗಣೆ ಆರೋಪದ ಮೇಲೆ 12 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ  ಬಿಡುಗಡೆಗೊಂಡಿದ್ದಾರೆ. ತನ್ನನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸುವಂತೆ ಮೊಹಮ್ಮದ್‌ ಹನೀಫ್‌  ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ ಪಾಠಕ್‌ ಅವರು ಫೆಬ್ರುವರಿ 2ರೊಳಗೆ  ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.