ADVERTISEMENT

ತೆಲಂಗಾಣದಲ್ಲಿ ಬಿಸಿಲಿನ ಝಳಕ್ಕೆ 21 ಮಂದಿ ಬಲಿ

ಏಜೆನ್ಸೀಸ್
Published 18 ಏಪ್ರಿಲ್ 2017, 11:50 IST
Last Updated 18 ಏಪ್ರಿಲ್ 2017, 11:50 IST
ತೆಲಂಗಾಣದಲ್ಲಿ ಬಿಸಿಲಿನ ಝಳಕ್ಕೆ 21 ಮಂದಿ ಬಲಿ
ತೆಲಂಗಾಣದಲ್ಲಿ ಬಿಸಿಲಿನ ಝಳಕ್ಕೆ 21 ಮಂದಿ ಬಲಿ   
ಹೈದರಾಬಾದ್: ತೆಲಂಗಾಣದ ಕೆಲವೆಡೆ ಕಳೆದ ವಾರದಿಂದ ಬಿಸಿಲಿನ ತಾಪ ಏರುತ್ತಿದ್ದು, ಬಿಸಿಲಿನ ಝಳಕ್ಕೆ  21 ಮಂದಿ ಸಾವನ್ನಪ್ಪಿದ್ದಾರೆ. 
 
ಬಿಸಿಲಿನ ತಾಪಕ್ಕೆ ಜನರು ಅಕ್ಷರಶಃ ತತ್ತರಿಸಿದ್ದು, ಮನೆಯಿಂದ ಹೊರಗೆ ಹೋಗಲು ಭಯಪಡುತ್ತಿದ್ದಾರೆ. ಹೈದರಾಬಾದ್‌ ಸೇರಿದಂತೆ ನೆಲಗೊಂಡ, ನಿಜಾಮಾಬಾದ್, ವಾರಂಗಲ್,  ರಂಗರೆಡ್ಡಿ ಜಿಲ್ಲೆಗಳಲ್ಲಿ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ.  
 
ಮುಂದಿನ 48 ಗಂಟೆಗಳವರೆಗೂ ಬಿಸಿಲಿನ ತಾಪ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.