ADVERTISEMENT

ದುರಂತ ಸ್ಥಳಕ್ಕೆ ಭೇಟಿ ನೀಡಲು ಪರಿಕ್ಕರ್‌ಗೆ ಮೋದಿ ಸೂಚನೆ

ಶಸ್ತ್ರಾಗಾರದಲ್ಲಿ ಯೋಧರ ಸಾವು ನೋವಿನ ಸಂಗತಿ: ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 31 ಮೇ 2016, 6:44 IST
Last Updated 31 ಮೇ 2016, 6:44 IST
ದುರಂತ ಸ್ಥಳಕ್ಕೆ ಭೇಟಿ ನೀಡಲು ಪರಿಕ್ಕರ್‌ಗೆ ಮೋದಿ ಸೂಚನೆ
ದುರಂತ ಸ್ಥಳಕ್ಕೆ ಭೇಟಿ ನೀಡಲು ಪರಿಕ್ಕರ್‌ಗೆ ಮೋದಿ ಸೂಚನೆ   

ನವದೆಹಲಿ(ಪಿಟಿಐ): ಮಹಾರಾಷ್ಟ್ರದ ಪಲ್ಗಾಂವ್‌ನ ಕೇಂದ್ರ ಶಸ್ತ್ರಾಗಾರದಲ್ಲಿ ಬೆಂಕಿ ದುರಂತ ಸಂಭವಿಸಿ ಯೋಧರು ಸಾವಿಗೀಡಾಗಿರುವುದು ನೋವಿನ ಸಂಗತಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ದುರಂತ ಸಂಭವಿಸಿದ ಶಸ್ತ್ರಾಗಾರ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಹಾಗೂ ಇತರ ಮಾಹಿತಿ ಪಡೆಯುವಂತೆ ರಕ್ಷಣಾ ಸಚಿವ ಮನೋಹರ ಪರಿಕ್ಕರ್‌ ಅವರಿಗೆ ನರೇಂದ್ರ ಮೋದಿ ಅವರು ಸೂಚನೆ ನೀಡಿ ಟ್ವೀಟ್ ಮಾಡಿದ್ದಾರೆ.

‘ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖವಾಗಿಲಿ’ ಎಂದು ಅವರು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ದುರದೃಷ್ಟಕರ
ದುರಂತ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡಣವೀಸ್‌ ವಿಷಾದಿಸಿದ್ದಾರೆ.

ಈ ಸಂಬಂಧ ವಾರ್ದ ಜಿಲ್ಲಾಧಿಕಾರಿ ಜತೆ ಮಾತನಾಡಿ, ಅಗತ್ಯವಿರುವ ಎಲ್ಲಾ ಸಹಕಾರ ನೀಡುವಂತೆ ಹಾಗೂ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT