ಮುಂಬೈ (ಪಿಟಿಐ): ದುರಾಸೆ ವಿಚ್ಛೇದನಕ್ಕೆ ಕಾರಣವಾಗಬಹುದು ಎಂದು ಶಿವಸೇನೆ ಬಿಜೆಪಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಪ್ರಕಟವಾದ ಬೆನ್ನಲೇ ಶಿವಸೇನೆ ತನ್ನ ಮುಖವಾಣಿಯಾದ ಸಾಮ್ನಾ ಸಂಪಾದಕೀಯದಲ್ಲಿ ದುರಾಸೆ ವಿಚ್ಛೇದನಕ್ಕೆ ಕಾರಣವಾಗಬಹುದು ಎಂದು ಬರೆಯಲಾಗಿದೆ.
ಮಿತ್ರ ಪಕ್ಷಗಳ ಗುರಿ ಗೆಲುವು ಮಾತ್ರವೇ ಆಗಿರಬೇಕು. ಹೆಚ್ಚು ಸ್ಥಾನಗಳನ್ನು ಪಡೆಯುವುದು ಅಲ್ಲ ಎಂದಿರುವ ಸೇನೆ ಬಿಜೆಪಿ ಹೆಚ್ಚು ಸ್ಥಾನಗಳನ್ನು ಕೇಳುವುದು ಸರಿಯಾದ ಕ್ರಮ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.