ADVERTISEMENT

ದೆಹಲಿಯಲ್ಲಿ ಮಳೆ: 9 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 30 ಮೇ 2014, 19:30 IST
Last Updated 30 ಮೇ 2014, 19:30 IST

ನವದೆಹಲಿ (ಐಎಎನ್‌ಎಸ್‌): ರಾಜ­ಧಾನಿ­ಯಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ 9 ಮಂದಿ ಮೃತಪಟ್ಟಿದ್ದಾರೆ. ಮೂರು ವಿಮಾನಗಳಿಗೆ ಹಾನಿಯಾ­ಗಿದ್ದು, ಪ್ರತಿಕೂಲ ಹವಾಮಾನದ ಕಾರಣ ದೆಹಲಿಗೆ ಬರುತ್ತಿದ್ದ 21 ವಿಮಾನ­ಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಇಂದಿರಾಗಾಂಧಿ ಅಂತರ­ರಾಷ್ಟ್ರೀಯ ವಿಮಾನ ನಿಲ್ದಾಣದ 3ನೇ ಟರ್ಮಿನಲ್‌ನಲ್ಲಿ ನಿಲ್ಲಿಸಿದ್ದ ಮೂರು ವಿಮಾನಗಳಿಗೆ ಹಾನಿಯಾಗಿದೆ. ಸಂಚಾರ ಮಾರ್ಗ ಬದಲಾವಣೆಗೊಂಡ ವಿಮಾನ­ಗಳಲ್ಲಿ ನಾಲ್ಕು ಅಂತರ­ರಾಷ್ಟ್ರೀಯ ವಿಮಾನಗಳೂ ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.