ADVERTISEMENT

ದೆಹಲಿಯಲ್ಲಿ ಸರ್ಕಾರ ರಚನೆ ಇಲ್ಲ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2014, 10:23 IST
Last Updated 3 ನವೆಂಬರ್ 2014, 10:23 IST

ನವದೆಹಲಿ (ಪಿಟಿಐ): ದೆಹಲಿಯಲ್ಲಿ ನೂತನ ಸರ್ಕಾರ ರಚಿಸದಿರಲು  ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ.

ಬಿಜೆಪಿ ದೆಹಲಿ ಘಟಕದ ಅಧ್ಯಕ್ಷರಾದ ಸತೀಶ್‌ ಉಪಾಧ್ಯಯ ಅವರು ಇಂದು ರಾಜ್ಯಪಾಲ ನಜೀಬ್‌ ಜಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪ್ರಸಕ್ತ ಸಂದರ್ಭದಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಮರು ಚುನಾವಣೆ ನಡೆಸುವುದೆ ಒಳಿತು ಎಂದು ಸತೀಶ್‌ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

2015ರ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.
ಆದಾಗ್ಯೂ ಎಎಪಿ, ಕಾಂಗ್ರೆಸ್‌ ನ ಅಭಿಪ್ರಾಯ ಪಡೆದು ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT