ನವದೆಹಲಿ (ಪಿಟಿಐ): ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಯತ್ನಿಸುತ್ತಿರುವುದು ಸರಿ ಎಂಬ ತಮ್ಮ ಹೇಳಿಕೆಗೆ ಪಕ್ಷದೊಳಗೆ ವ್ಯಕ್ತವಾಗಿರುವ ಟೀಕೆಗೆ ಎದೆಗುಂದದ ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ‘ನಾನು ಬಿಜೆಪಿಯನ್ನು ಬೆಂಬಲಿಸುತ್ತಿಲ್ಲ. ವಾಸ್ತವ ಮತ್ತು ಸಾಂವಿಧಾನಿಕ ಅವಕಾಶಗಳನ್ನು ವಿವರಿಸಿದ್ದೇನೆ ಅಷ್ಟೇ ಎಂದಿದ್ದಾರೆ.
ಬಿಜೆಪಿ ಬಳಿ ಸರ್ಕಾರ ರಚಿಸುವಷ್ಟು ಸಂಖ್ಯಾ ಬಲ ಇದೆ ಎನ್ನುವುದು ಲೆಫ್ಟಿನೆಂಟ್ ಗವರ್ನರ್ಗೆ ಅನಿಸಿದರೆ ಸರ್ಕಾರ ರಚನೆಗೆ ಆ ಪಕ್ಷವನ್ನು ಆಹ್ವಾನಿಸುವುದರಲ್ಲಿ ತಪ್ಪೇನಿಲ್ಲ ಎಂದು ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ‘ಸರ್ಕಾರ ರಚನೆಗೆ ಬಿಜೆಪಿಯನ್ನು ಆಹ್ವಾನಿಸಿದರೆ ಅವರು ಬಹುಮತ ಸಾಬೀತುಪಡಿಸಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.