ಜೆಮ್ಶೆಡ್ಪುರ (ಪಿಟಿಐ): ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಜಾರ್ಖಂಡ್ ಅನ್ನು ದೇಶದಲ್ಲಿಯೇ ನಂಬರ್ ಒನ್ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಜಾರ್ಖಂಡ್ ನೈಸರ್ಗಿಕ ಸಂಪತ್ತು ಹಾಗೂ ಗಣಿ ಲೂಟಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದಾಗಿ ಮುಂದಿನ ಕೆಲವು ವರ್ಷಗಳಲ್ಲಿ ರಾಜ್ಯದ ಖಜಾನೆಗೆ 20 ಸಾವಿರ ಕೊಟಿ ರೂಪಾಯಿ ಉಳಿತಾಯವಾಗಲಿದೆ ಎಂದು ತಿಳಿಸಿದರು.
ಸಂಪದ್ಭರಿತ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು 14 ವರ್ಷಗಳಿಂದ ಕೊಳ್ಳೆ ಹೊಡೆದ ರಾಜಕೀಯ ಪಕ್ಷಗಳಿಗೆ ಜನತೆ ಪಾಠ ಕಲಿಸಲು ವಿಧಾನಸಭಾ ಚುನಾವಣೆ ಸರಿಯಾದ ಸಂದರ್ಭ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.