ADVERTISEMENT

ನಕ್ಸಲೀಯರ ದಾಳಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2014, 19:30 IST
Last Updated 4 ಏಪ್ರಿಲ್ 2014, 19:30 IST

ರಾಯ್‌ಪುರ (ಪಿಟಿಐ): ನಕ್ಸಲೀಯರ ಬಲಿಷ್ಠ ಗುಂಪೊಂದು ಛತ್ತೀಸಗಡದ ಸುಕ್ಮಾ ಜಿಲ್ಲೆಯ ಬುರ್ಕಪಾಲ್‌ ಗ್ರಾಮದಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಶಿಬಿರದ ಮೇಲೆ ಶುಕ್ರವಾರ ದಾಳಿ ನಡೆಸಿದ ಪರಿಣಾಮ   ಒಬ್ಬ ಯೋಧನಿಗೆ ಗಾಯವಾಗಿದೆ.

ನಕ್ಸಲ್‌ ಪೀಡಿತ  ಬಸ್ತರ್‌ ವಲಯದಲ್ಲಿ ಏಪ್ರಿಲ್‌ 10ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.