ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಸವಾಲು ಹಾಕಿದ್ದಾರೆ.
ಇದು ಕೇಕ್ ತಿಂದಷ್ಟು ಸುಲಭವಲ್ಲ ಎಂದೂ ಹೇಳಿದ್ದಾರೆ. ಹೈದರಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಅಮಿತ್ ಷಾ ಹೇಳಿಕೆಗೆ ಪ್ರತಿಕ್ರಿಯಿಸಿದ ಓವೈಸಿ, ‘ಬೇರೊಬ್ಬನ್ನು ಕಣಕ್ಕಿಳಿಸುವ ಬದಲು ನೀವೇ ಸ್ಪರ್ಧಿಸಿ’ ಎಂದು ಆಹ್ವಾನ ನೀಡಿದ್ದಾರೆ.