ADVERTISEMENT

ನಿತೀಶ್‌ ಕುಮಾರ್‌ ಮುಖ್ಯಮಂತ್ರಿ: ಆರ್‌ಜೆಡಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2015, 6:20 IST
Last Updated 4 ಜೂನ್ 2015, 6:20 IST

ಪಟ್ನಾ (ಪಿಟಿಐ): ಬಿಹಾರದಲ್ಲಿ ಜನತಾ ಪರಿವಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಮುಂದುವರೆದರೆ ಯಾವುದೇ ಅಭ್ಯಂತರವಿಲ್ಲ ಎಂದು ಲಾಲ್‌ ಪ್ರಸಾದ್‌ ಯಾದವ್‌ ನೇತೃತ್ವದ ಆರ್‌ಜೆಡಿ ಪಕ್ಷ ಗುರುವಾರ ತಿಳಿಸಿದೆ.

ಈ ಬಗ್ಗೆ ಆರ್‌ಜೆಡಿಯ ರಾಜ್ಯಾಧ್ಯಕ್ಷರಾದ ವಶಿಷ್ಠ ನರೇನ್‌ ಸಿಂಗ್‌ ಅವರು ‘ ನಿತೀಶ್‌ ಕುಮಾರ್‌ ಜನತಾ ಪರಿವಾರದ ಮುಖ್ಯಮಂತ್ರಿಯಾದರೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.

ಸಂಯುಕ್ತ ಜನತಾದಳವು ಮುಖ್ಯಮಂತ್ರಿ ಹುದ್ದೆ ಕುರಿತಂತೆ ಅಭಿಪ್ರಾಯ ತಿಳಿಸುವಂತೆ ಆರ್‌ಜೆಡಿ ಪಕ್ಷವನ್ನು ಕೋರಿತ್ತು. ಈಗಾಗಲೇ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಪಕ್ಷಗಳು ನಿತೀಶ್‌ ಕುಮಾರ್‌ಗೆ ಬೆಂಬಲ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.