ADVERTISEMENT

ನಿತೀಶ್ ಮುಂದಿನ ಸಿ.ಎಂ: ಲಾಲೂ ಘೋಷಣೆ

ಬಿಹಾರದ ಫಲಿತಾಂಶ ರಾಷ್ಟ್ರ ರಾಜಕಾರಣದಲ್ಲಿ ದೀರ್ಘಕಾಲದ ಪರಿಣಾಮ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2015, 10:55 IST
Last Updated 8 ನವೆಂಬರ್ 2015, 10:55 IST

ಪಟ್ನಾ(ಪಿಟಿಐ): ಮಹಾ ಮೈತ್ರಿಕೂಟ ಅಭೂತಪೂರ್ವ ಜಯಗಳಿಸಿದ್ದು, ನಿತೀಶ್ ಕುಮಾರ್ ಅವರು ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಲಾಲೂ ಪ್ರಸಾದ್ ಪ್ರಕಟಿಸಿದರು.

ಹೆಚ್ಚು ಸ್ಥಾನ ಪಡೆದು ಮಹಾಮೈತ್ರಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿದಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಅವರು ಭಾನುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

‘ಮಹಾಮೈತ್ರಿ ಬೆಂಬಲಿಸಿದ ಬಿಹಾರದ ಜನರಿಗೆ ಅಭಿನಂದನೆಗಳು. ದೆಹಲಿಯಲ್ಲಿ ಮೋದಿ ಸರ್ಕಾರ ಉಳಿಸಿದರೆ ದೇಶವನ್ನು ಒಡೆದು ಹಾಕುತ್ತದೆ. ಮೋದಿ ಸರ್ಕಾರವನ್ನು ಕಿತ್ತೊಗೆಯಲು ರಾಷ್ಟ್ರದಾದ್ಯಂತ ಪ್ರವಾಸ ಮಾಡುತ್ತೇನೆ. ಬಿಹಾರದ ಫಲಿತಾಂಶ ರಾಷ್ಟ್ರ ರಾಜಕಾರಣದಲ್ಲಿ ದೀರ್ಘಕಾಲದ ಪರಿಣಾಮ ಬೀರಲಿದೆ’ ಎಂದು ಲಾಲೂ ಅವರು ತಮ್ಮ ಮುಂದಿನ ನಡೆ ಕುರಿತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.