ನವದೆಹಲಿ: 16ನೇ ಲೋಕಸಭಾ ಅಧಿವೇಶನದ ಎರಡನೇ ದಿನದ ಕಲಾಪವಾದ ಇಂದು ಹಂಗಾಮಿ ಸ್ಪೀಕರ್ ಕಮಲ್ ನಾಥ್ ನೂತನ ಸಂಸದರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಲಾಪ ಆರಂಭವಾಗುತ್ತಿದ್ದಂತೆ ಸಂಸದರ ಪ್ರತಿಜ್ಞಾವಿಧಿ ಬೋಧನೆಗೆ ಅವಕಾಶ ಕಲ್ಪಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಸಂಸದರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂಸದರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕನ್ನಡದಲ್ಲಿ ಪ್ರತಿಜ್ಞಾವಿಧಿ...
ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ಕುಮಾರ್, ಸಿದ್ಧೇಶ್ವರ ಅವರು ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.