ADVERTISEMENT

ನೇರ ಸಂಪರ್ಕ: ಕಾರ್ಯದರ್ಶಿಗಳಿಗೆ ಪ್ರಧಾನಿ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2014, 20:04 IST
Last Updated 4 ಜೂನ್ 2014, 20:04 IST

ನವದೆಹಲಿ (ಪಿಟಿಐ): ಬಿಕ್ಕಟ್ಟು ಬಗೆಹರಿಸಿಕೊಳ್ಳಲು ಹಾಗೂ ತ್ವರಿತ ನಿರ್ಧಾರಕ್ಕೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ತಮ್ಮನ್ನು ನೇರವಾಗಿ ಸಂಪರ್ಕಿಸು­ವಂತೆ ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳಿಗೆ ಪ್ರಧಾನಿ  ನರೇಂದ್ರ ಮೋದಿ ಬುಧವಾರ ಸೂಚಿಸಿದ್ದಾರೆ.

ಇದೇ ಮೊದಲ ಬಾರಿ ಎಲ್ಲ ಇಲಾಖೆ­ಗಳ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಅವರು 3 ಗಂಟೆ  ಸಭೆ ನಡೆಸಿದ ಸಂದರ್ಭದಲ್ಲಿ ಹೀಗೆ ಹೇಳಿದರು.

‘ನಿರ್ಧಾರಗಳು ಹಾಗೂ ಕಾರ್ಯ­ಕ್ರಮ­ಗಳ ಅನುಷ್ಠಾನ ವಿಳಂಬವಾಗ­ಬಾರದು. ಯಾವುದೇ ವಿಷಯಗಳಿಗೆ ಸಂಬಂಧಿಸಿ ಸಲಹೆ ಕೇಳುವುದಕ್ಕೆ  ನನಗೆ ನೇರವಾಗಿ ಕರೆ ಅಥವಾ ಇ–ಮೆಲ್‌ ಮಾಡಿ’ ಎಂದು ಮೋದಿ ಹೇಳಿದ್ದಾಗಿ ಮೂಲಗಳು ತಿಳಿಸಿವೆ.

ಹಣಕಾಸು ಕಾರ್ಯದರ್ಶಿ ಅನಿಲ್‌ ಗೋಸ್ವಾಮಿ, ರಕ್ಷಣಾ ಕಾರ್ಯದರ್ಶಿ ರಾಧಾಕೃಷ್ಣ ಮಾಥೂರ್‌, ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್‌ ಸೇರಿದಂತೆ 77 ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.