ADVERTISEMENT

ನೋಟು ರದ್ದತಿಗೆ ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಕ್ರಿಯೆ: ಮೂರ್ತಿ

ಪಿಟಿಐ
Published 21 ಮಾರ್ಚ್ 2018, 19:40 IST
Last Updated 21 ಮಾರ್ಚ್ 2018, 19:40 IST

ಕೋಲ್ಕತ್ತ: ಕೇಂದ್ರ ಸರ್ಕಾರ 2016ರಲ್ಲಿ ಕೈಗೊಂಡ ನೋಟು ರದ್ದತಿ ನಿರ್ಧಾರಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿಯ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಮಂಗಳವಾರ ಸಂವಾದದಲ್ಲಿ ಪಾಲ್ಗೊಂಡಿದ್ದ ಅವರು, ನಗರ ಪ್ರದೇಶಗಳ ಜನರು ಸರ್ಕಾರದ ಈ ನಿರ್ಣಯವನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳಲಿಲ್ಲ ಎಂದರು.

‘ನಾನು ಅರ್ಥಶಾಸ್ತ್ರಜ್ಞ ಅಥವಾ ವಿಷಯ ತಜ್ಞ ಅಲ್ಲ. ಹೀಗಾಗಿ ಸರ್ಕಾರ ತೆಗೆದುಕೊಂಡ ನೋಟು ರದ್ದತಿ ನಿರ್ಧಾರದ ಹಿಂದಿನ ತರ್ಕ ನನಗೆ ಇದುವರೆಗೂ ಅರ್ಥವಾಗಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.