ಶ್ರೀನಗರ: ಉಗ್ರರ ಒಳನುಸುಳುವಿಕೆ ತಡೆಯಲು ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಪ್ರದೇಶದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ಭಾನುವಾರ ತಿಳಿಸಿದೆ.
ಗಡಿನಿಯಂತ್ರಣ ರೇಖೆ ಬಳಿ ಉಗ್ರರು ಒಳನುಸುಳಲು ಪ್ರಯತ್ನಿಸುತ್ತಿದ್ದುದು ತಿಳಿದುಬಂದದ್ದರಿಂದ ಶನಿವಾರ ಕಾರ್ಯಾಚರಣೆ ಆರಂಭಿಸಲಾಗಿತ್ತು. ರಾತ್ರಿ ವೇಳೆಗೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಇನ್ನಿಬ್ಬರು ಉಗ್ರರನ್ನು ಭಾನುವಾರ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರಿಂದ ನಾಲ್ಕು ಆಯುಧಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಶ್ಮೀರ ಕಣಿವೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ಹೆಚ್ಚಾಗಿದೆ. 2017ರ ಮೊದಲ ನಾಲ್ಕು ತಿಂಗಳುಗಳಲ್ಲಿ ಪಾಕಿಸ್ತಾನಿ ಪಡೆಗಳು 67 ಬಾರಿ ಕದನವಿರಾಮ ಉಲ್ಲಂಘಿಸಿವೆ. ಈ ಪೈಕಿ ಏಪ್ರಿಲ್ನಲ್ಲೇ 26 ಬಾರಿ ಕದನವಿರಾಮ ಉಲ್ಲಂಘನೆಯಾಗಿದೆ. ಉಳನುಸುಳುವಿಕೆ ತಡೆ ಕಾರ್ಯಾಚರಣೆಯಲ್ಲಿ ಜನವರಿ–ಏಪ್ರಿಲ್ ನಡುವಣ ಅವಧಿಯಲ್ಲಿ ಒಟ್ಟು 27 ಉಗ್ರರನ್ನು ಹತ್ಯೆ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.