ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಹಾಬ್ ಪ್ರಾಂತ್ಯದ ಶಾಯಿದ್ಪುರದ ಬಳಿ ಪೊಲೀಸ್ ತನಿಖಾ ಕೇಂದ್ರದ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ.
‘ಪೊಲೀಸ್ ಸಿಬ್ಬಂದಿಯಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಈ ದಾಳಿ ನಡೆಸಿದ್ದಾರೆ. ಆದರೆ ಪೊಲೀಸ್ ಸಿಬ್ಬಂದಿ ಅವರ ಮೇಲೆ ಪ್ರತಿ ದಾಳಿ ನಡೆಸಿದ ಕಾರಣ ಉಗ್ರರು ತಪ್ಪಿಸಿಕೊಂಡರು. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.