ADVERTISEMENT

ಪ್ರತಿಭಾ ಪಾಟೀಲ್‌ ಸಹೋದರ ಆರೋಪಿ

ಕಾಂಗ್ರೆಸ್‌ ಮುಖಂಡರೊಬ್ಬರ ಕೊಲೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 7 ಜುಲೈ 2014, 19:30 IST
Last Updated 7 ಜುಲೈ 2014, 19:30 IST

ಜಲಗಾಂವ್‌ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ 2005ರಲ್ಲಿ ನಡೆದ ಕಾಂಗ್ರೆಸ್‌ ಮುಖಂಡರೊಬ್ಬರ ಕೊಲೆ ಪ್ರಕರಣದಲ್ಲಿ  ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ ಅವರ ಕಿರಿಯ ಸಹೋದರ ಗಜೇಂದ್ರಸಿಂಗ್‌ ಪಾಟೀಲ್‌ ಅವರನ್ನು ಆರೋಪಿಯನ್ನಾಗಿ ಹೆಸರಿ­ಸಲಾಗಿದೆ.

ಕಾಂಗ್ರೆಸ್‌ ಮುಖಂಡ  ಪ್ರೊ.ವಿ.ಜಿ.ಪಾಟೀಲ್‌ ಅವರ ಕಾರಿಗೆ ಕಲ್ಲು ಎಸೆದು, ನಂತರ ಅವರನ್ನು ಇರಿದು ಕೊಲ್ಲಲಾಗಿತ್ತು. ಇದು ರಾಜಕೀಯ ದ್ವೇಷದ ಕೊಲೆ ಎಂದು ಹೇಳಲಾಗಿತ್ತು.

ಪ್ರಕರಣದ ಸಂಚು ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಇವರಿಬ್ಬರು ಗಜೇಂದ್ರಸಿಂಗ್‌ ಹೆಸರು ಬಾಯಿ­ಬಿಟ್ಟಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ಗಜೇಂದ್ರ­ಸಿಂಗ್‌ ಅವರನ್ನು ರಕ್ಷಿಸುತ್ತಿದೆ ಎಂದು ವಿ.ಜಿ.ಪಾಟೀಲ್‌ ಪತ್ನಿ ರಜನಿ ಪಾಟೀಲ್‌ ಆರೋಪಿಸಿದ್ದಾರೆ.
ಪ್ರೊ.ಪಾಟೀಲ್‌ ಅವರು ಜಲಗಾಂವ್‌ ಜಿಲ್ಲಾ ಕಾಂಗ್ರೆಸ್‌್ ಸಮಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಗಜೇಂದ್ರಸಿಂಗ್‌್ ಅವರನ್ನು ಸೋಲಿಸಿ­ದ್ದರು. ಇದಾದ ಒಂದು ತಿಂಗಳ ಬಳಿಕ ಪಾಟೀಲ್‌ ಕೊಲೆಯಾದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.