ಹೈದಾರಾಬಾದ್ (ಪಿಟಿಐ): ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹಾಗೂ ಇತರ ವಾಣಿಜ್ಯ ಚಟುವಟಿಕೆಗಳಿಗಾಗಿ 5 ಲಕ್ಷ ಎಕರೆ ಭೂಮಿ ಬಳಕೆಗೆ ಸಿದ್ಧವಿದೆ ಎಂದು ತೆಲಂಗಾಣ ಸರ್ಕಾರ ತಿಳಿಸಿದೆ.
ತೆಲಂಗಾಣವನ್ನು ಹೂಡಿಕೆದಾರರ ಪ್ರಥಮ ಆಯ್ಕೆಯ ಪ್ರದೇಶವನ್ನಾಗಿಸುವ ಗುರಿಯಿರಿಸಿಕೊಂಡು ಹೊಸ ಕೈಗಾರಿಕಾ ನೀತಿಯನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದರು.
‘ನೂತನ ತೆಲಂಗಾಣ ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ರತನ್ ಟಾಟಾ ರಂತಹ ಕೈಗಾರಿಕೋದ್ಯಮಿಗಳು ಮುಂದೆ ಬಂದಿದ್ದಾರೆ. ಇಲ್ಲಿ ಕೈಗಾರಿಕೆ ಹಾಗೂ ಕಾರ್ಪೊರೇಟ್ ಕಂಪೆನಿ ಸ್ಥಾಪಿಸುವವರನ್ನು ಸ್ವಾಗತಿಸುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.