ನವದೆಹಲಿ (ಪಿಟಿಐ): ‘ದೆಹಲಿಯಲ್ಲಿ ಸರ್ಕಾರ ರಚಿಸುವುದಕ್ಕೆ ಬಿಜೆಪಿಗೆ ಅವಕಾಶ ಕೊಡಬೇಕು’ ಎಂದು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನೀಡಿದ ಹೇಳಿಕೆಗೆ ಕಾಂಗ್ರೆಸ್ ಗುರುವಾರ ಅಸಮ್ಮತಿ ಸೂಚಿಸಿದೆ.
ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಪಕ್ಷದ ಪ್ರಭಾರ ಪ್ರಧಾನ ಕಾರ್ಯದರ್ಶಿ ಶಕೀಲ್ ಅಹ್ಮದ್, ‘ ಇದು ಶೀಲಾ ಅವರ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದನ್ನು ಸಂಪೂರ್ಣವಾಗಿ ವಿರೋಧಿಸಿದ್ದಾರೆ’ ಎಂದಿದ್ದಾರೆ.
ಶೀಲಾ ಅವರು ಆಘಾತಕಾರಿ ಹೇಳಿಕೆ ನೀಡಿದ್ದಾರೆ ಎಂದಿರುವ ದೆಹಲಿ ಕಾಂಗ್ರೆಸ್, ‘ಇದು ಅವರ ವೈಯಕ್ತಿಕ ಅನಿಸಿಕೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ದೇಶದ ರಾಜಧಾನಿಯಲ್ಲಿ ಬಿಜೆಪಿಗೆ ಸರ್ಕಾರ ರಚಿಸುವುದಕ್ಕೆ ನಾವು ಬಿಡುವುದಿಲ್ಲ’ ಎಂದು ದೆಹಲಿ ಕಾಂಗ್ರೆಸ್ ವಕ್ತಾರ ಮುಕೇಶ್ ಶರ್ಮಾ ಹೇಳಿದ್ದಾರೆ.
ಇದಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಕೂಡ ದನಿಗೂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.