ADVERTISEMENT

ಬಿಹಾರದ ರಾಜ್ಯಪಾಲ, ದಲಿತ ನಾಯಕ ರಾಮನಾಥ್‌ ಕೋವಿಂದ್‌‌ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ

ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಘೋಷಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2017, 9:27 IST
Last Updated 19 ಜೂನ್ 2017, 9:27 IST
ರಾಮನಾಥ್‌ ಕೋವಿಂದ್‌
ರಾಮನಾಥ್‌ ಕೋವಿಂದ್‌   

ನವದೆಹಲಿ: ಬಿಹಾರದ ರಾಜ್ಯಪಾಲ ಹಾಗೂ ದಲಿತ ನಾಯಕ ರಾಮನಾಥ್‌ ಕೋವಿಂದ್‌ ಅವರನ್ನು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ನವದೆಹಲಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಅಧ್ಯಕ್ಷ ‌ಅಮಿತ್‌ ಷಾ, ಕೋವಿಂದ್‌ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಿಸಿದರು.

ಕೋವಿಂದ್‌ ಅವರು ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು 1999 ಮತ್ತು 2002ರ ಅವಧಿಯಲ್ಲಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಪಕ್ಷದ ರಾಷ್ಟ್ರೀಯ ವಕ್ತಾರರಾಗಿಯೂ ಅವರು ಕೆಲಸ ಮಾಡಿದ್ದರು.

ADVERTISEMENT

ಕೋಲಿ ಸಮುದಾಯಕ್ಕೆ ಸೇರಿದ ಕೋವಿಂದ್‌ ಅವರು ಉತ್ತರ ಪ್ರದೇಶದ ಕಾನ್ಪುರ್‌ ದೇಹಾತ್‌ನಲ್ಲಿ 1945ರ ಅಕ್ಟೋಬರ್‌ 1ರಂದು ಜನಿಸಿದರು. ಕೋವಿಂದ್‌ ಅವರು ದೆಹಲಿ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ನಲ್ಲಿ ವಕೀಲರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.