ADVERTISEMENT

ಭೀಕರ ರಸ್ತೆ ಅಪಘಾತ: 10 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2014, 10:45 IST
Last Updated 29 ಸೆಪ್ಟೆಂಬರ್ 2014, 10:45 IST

ಖಂಡ್ವಾ(ಪಿಟಿಐ): ಜನರನ್ನು ಹೊತ್ತೊಯುತ್ತಿದ್ದ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ಜನರು ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದ ಇಂದೋರ್–ಇಚ್ಚಾಪುರ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಜನರು ನವರಾತ್ರಿ ಸಮಾರಂಭದಲ್ಲಿ ಪಾಲ್ಗೊಂಡು ಹಿಂಗಿರುಗುತ್ತಿದ್ದ ವೇಳೆ, ಖಂಡ್ವಾದಿಂದ ಸುಮಾರು 15 ಕಿ.ಮೀ ದೂರವಿರುವ ಚೈಗಾಂವ್‌ ಮಖಾನ್ ಪಟ್ಟಣದ ಬಳಿ ನಸುಕಿನ 3.45ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಮೃತರಲ್ಲಿ ಇಬ್ಬರು ಬಾಲಕರೂ ಸೇರಿದ್ದು, ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ.

ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡ ಜನರನ್ನು ಹೊತ್ತು ಹಿಂದಿರುಗುತ್ತಿದ್ದ ಪಿಕಪ್‌ ಟ್ರಕ್‌ಗೆ ಉಜ್ಜೈನಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಗೋಧಿ  ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಖಂಡ್ವಾ ಪೊಲೀಸ್ ಅಧೀಕ್ಷಕ ಮನೋಜ್‌ ಶರ್ಮಾ ಅವರು ತಿಳಿಸಿದ್ದಾರೆ.

ADVERTISEMENT

ಮೃತರು ಖರ್ಗೋನ್ ಜಿಲ್ಲೆಯ ಖೇಡಲ್ ಜಾಗೀರ್‌ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ಗಾಯಾಳುಗಳನ್ನು ಖಂಡ್ವಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.