ಭ್ರಷ್ಟರ ವಿಚಾರಣೆಗೆ ಆನ್ಲೈನ್ ವ್ಯವಸ್ಥೆ
ನವದೆಹಲಿ: ಸರ್ಕಾರಿ ಸಿಬ್ಬಂದಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯ ವಿಳಂಬವನ್ನು ತಪ್ಪಿಸಲು ಹೊಸ ಆನ್ಲೈನ್ ವ್ಯವಸ್ಥೆಗೆ ಗುರುವಾರ ಚಾಲನೆ ನೀಡಲಾಯಿತು.
‘ಸರ್ಕಾರಿ ಸಿಬ್ಬಂದಿ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಹೊಸ ವ್ಯವಸ್ಥೆಯು ಚುರುಕು ನೀಡಲಿದ್ದು, ಶಿಸ್ತು ಕ್ರಮದ ನಡೆಸುವುದರಿಂದ ಪಾರದರ್ಶಕತೆ ಬರಲಿದೆ’ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
**
3500 ಮಂದಿ ಭ್ರಷ್ಟರು
ನವದೆಹಲಿ: ಭ್ರಷ್ಟಾಚಾರದಲ್ಲಿ ತೊಡಗಿರುವ 3500ಕ್ಕೂ ಹೆಚ್ಚು ಅಧಿಕಾರಿಗಳ ಮೇಲೆ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಕಣ್ಣಿಟ್ಟಿದೆ.
**
ಸಾಮಾಜಿಕ ಜಾಲತಾಣದ ಮೇಲೆ ನಿಗಾ: ಶೀಘ್ರ ನೀತಿ
ನವದೆಹಲಿ: ಸಾಮಾಜಿಕ ಜಾಲ ತಾಣಗಳ ಮೇಲೆ ನಿಗಾ ಇಡುವುದಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಹೊಸ ನೀತಿಯನ್ನು ಅಂತಿಮಗೊಳಿಸುತ್ತಿದೆ.
**
ಮೂವರು ವಿದ್ಯಾರ್ಥಿ ಪ್ರತಿನಿಧಿಗಳ ಅಮಾನತು
ನವದೆಹಲಿ: ‘ಅಶಿಸ್ತು’ ಮತ್ತು ‘ಪ್ರಮಾದ’ದ ಕಾರಣ ನೀಡಿ ವಿದ್ಯಾರ್ಥಿ ಸಂಘಟನೆಯ ಮೂವರು ಪದಾಧಿಕಾರಿಗಳನ್್ನು ವಿವಿಧ ಸಮಿತಿಗಳಿಂದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು (ಜೆಎನ್ಯು) ಅಮಾನತು ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.