ADVERTISEMENT

ಮಣಿಪುರ: ಬಂಡುಕೋರರ ದಾಳಿಗೆ 20 ಯೋಧರು ಬಲಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2015, 11:25 IST
Last Updated 4 ಜೂನ್ 2015, 11:25 IST

ಇಂಪಾಲ/ನವದೆಹಲಿ (ಪಿಟಿಐ): ಇಲ್ಲಿನ ದೋಗ್ರಾ ಸೇನಾ ತುಕಡಿಯ ಮೇಲೆ ಮಣಿಪುರ ಬಂಡುಕೋರರು ನಡೆಸಿದ ದಾಳಿಯಲ್ಲಿ 20 ಮಂದಿ ಯೋಧರು ಮೃತಪಟ್ಟು 10 ಜನ ಗಾಯಗೊಂಡಿದ್ದಾರೆ.

ಮಣಿಪುರದ ಗುಡ್ಡಗಾಡು ಜಿಲ್ಲೆ ಚಾಂದಲ್‌ನ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನಲ್ಲಿ ಹೊಂಚು ಹಾಕಿ ಕುಳಿತ್ತಿದ್ದ ಬಂಡುಕೋರರು ಸೇನಾ ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಸೇನಾಧಿಕಾರಿಗಳು ಮತ್ತು ಎಂಟು ಜನ ಯೋಧರು ಎನ್ನಲಾಗಿದೆ.

ಗಾಯಗೊಂಡ ಯೋಧರನ್ನು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT