ADVERTISEMENT

ಮಧ್ಯಾಹ್ನ ಸೋನಿಯಾ ಗಾಂಧಿ ಪತ್ರಿಕಾಗೋಷ್ಠಿ

​ಪ್ರಜಾವಾಣಿ ವಾರ್ತೆ
Published 16 ಮೇ 2014, 8:51 IST
Last Updated 16 ಮೇ 2014, 8:51 IST

ನವದೆಹಲಿ:  (ಪಿಟಿಐ) ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿರುವ ಮಧ್ಯೆಯೇ, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರು ಮಧ್ಯಾಹ್ನದ ಹೊತ್ತಿಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.

ಪ್ರಧಾನಿ ಮನಮೋಹನ ಸಿಂಗ್‌ ಅವರ ಗೌರವಾರ್ಥ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸದೇ ಇದ್ದ ರಾಹುಲ್‌ ಗಾಂಧಿ, ಈಗಾಗಲೇ ನವದೆಹಲಿಗೆ ವಾಪಸಾಗಿದ್ದಾರೆ. ರಾಹುಲ್‌ ಹಾಗೂ ಸೋನಿಯಾ ಪತ್ರಕರ್ತರ ಎದುರು ಮಧ್ಯಾಹ್ನದ ಹೊತ್ತಿಗೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.