ADVERTISEMENT

ಮಲಯಾಳಂ ಕವಿ ಕುರುಪ್‌ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2016, 19:30 IST
Last Updated 13 ಫೆಬ್ರುವರಿ 2016, 19:30 IST
ಮಲಯಾಳಂ ಕವಿ ಕುರುಪ್‌ ಇನ್ನಿಲ್ಲ
ಮಲಯಾಳಂ ಕವಿ ಕುರುಪ್‌ ಇನ್ನಿಲ್ಲ   

ತಿರುವನಂತಪುರ (ಪಿಟಿಐ): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಕವಿ ಹಾಗೂ ಪರಿಸರ ತಜ್ಞ ಒ.ಎನ್‌.ವಿ ಕುರುಪ್‌ (84) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.   ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಸೇರಿಸಲಾಗಿತ್ತು.

ಮಲಯಾಳಂ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ಕುರುಪ್‌ ಅವರು, ಚಲನಚಿತ್ರ ಮತ್ತು ನಾಟಕ ಕ್ಷೇತ್ರದಲ್ಲೂ  ಗುರುತಿಸಿಕೊಂಡಿದ್ದರು. ಕುರುಪ್‌ ಅವರಿಗೆ 2007ರಲ್ಲಿ ಜ್ಞಾನಪೀಠ   ಪ್ರಶಸ್ತಿ ,  2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.