ನವದೆಹಲಿ (ಪಿಟಿಐ): ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಪ್ರಧಾನಿ ಕಾರ್ಯಾಲಯ ಬಲವಾಗಿ ತಳ್ಳಿಹಾಕಿದೆ.
ಮಾಧ್ಯಮದಲ್ಲಿ ವರದಿಯಾಗಿರುವ ಸುದ್ದಿಯಲ್ಲಿ ಹುರುಳಿಲ್ಲ, ಸರ್ಕಾರ ಮತ್ತು ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಲು ಉದ್ದೇಶಪೂರ್ವಕವಾಗಿಯೇ ಈ ಸುದ್ದಿಯನ್ನು ಪ್ರಕಟಿಸಲಾಗಿದೆ ಎಂದು ಪ್ರತಿಕ್ರಿಯಿಸಿದೆ..
ಕಳೆದ ಹಲವು ದಿನಗಳಿಂದ ಪಂಕಜ್ ಸಿಂಗ್ ಅವರು ಪ್ರಧಾನಿ ಕಾರ್ಯಾಲಯ ಮತ್ತು ಗೃಹಸಚಿವಾಲಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ವರದಿಗಳು ಬಿತ್ತರಗೊಂಡಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.