ADVERTISEMENT

ಮಾಯಾವತಿ ವಿರುದ್ಧ  ಅವಹೇಳನಕಾರಿ ಹೇಳಿಕೆ: ದಯಾಶಂಕರ್‌ ಬಂಧನ

​ಪ್ರಜಾವಾಣಿ ವಾರ್ತೆ
Published 29 ಜುಲೈ 2016, 10:46 IST
Last Updated 29 ಜುಲೈ 2016, 10:46 IST
ಮಾಯಾವತಿ ವಿರುದ್ಧ  ಅವಹೇಳನಕಾರಿ ಹೇಳಿಕೆ: ದಯಾಶಂಕರ್‌ ಬಂಧನ
ಮಾಯಾವತಿ ವಿರುದ್ಧ  ಅವಹೇಳನಕಾರಿ ಹೇಳಿಕೆ: ದಯಾಶಂಕರ್‌ ಬಂಧನ   

ಪಟ್ನಾ (ಪಿಟಿಐ):  ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ  ಅವಹೇಳನಕಾರಿ ಹೇಳಿಕೆ ನೀಡಿರುವ ಉತ್ತರ ಪ್ರದೇಶದ  ಬಿಜೆಪಿ ಮುಖಂಡ ದಯಾಶಂಕರ್‌ ಸಿಂಗ್‌ ಅವರನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಗಡಿ ಭಾಗದಲ್ಲಿರುವ ಬುಕ್ಸಾರ್‌ ಪಟ್ಟಣದಲ್ಲಿ ದಯಾಶಂಕರ್‌ ಸಿಂಗ್‌ ಅವರನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಬಂಧಿಸಿದ್ದಾರೆ.

ದಯಾಶಂಕರ್‌ ಸಿಂಗ್‌ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸರ್‌ ವರಿಷ್ಠಾಧಿಕಾರಿ ಉಪೇಂದ್ರ ಕುಮಾರ್‌ ಖಚಿತಪಡಿಸಿದ್ದಾರೆ.
ಮಾಯವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.

ದಯಾಶಂಕರ್‌ ಹಲವು ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.