ಮುಂಬೈ(ಪಿಟಿಐ): 2006 ರಲ್ಲಿ ನಡೆದ ಮಾಲೆಗಾವ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನ ಕ್ಕೊಳಗಾಗಿರುವ ಒಂಬತ್ತು ಮಂದಿ ಮುಸ್ಲಿಮರ ಬಿಡುಗಡೆ ಮನವಿಗೆ ಮಹಾ ರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ.
ಒಂಬತ್ತು ಆರೋಪಿಗಳ ಬಿಡುಗಡೆ ಮನವಿ ಬಗ್ಗೆ ಸಿಬಿಐ ಮತ್ತು ಎಟಿಎಸ್್ ಪ್ರತಿಕ್ರಿಯೆಯನ್ನು ನ್ಯಾಯಾಲಯ ಪಡೆಯುವಂತೆ ಬಲಪಂಥೀಯ ಹಿಂದೂ ಸಂಘಟನೆಯ ಆರೋಪಿ ಒಬ್ಬರು ಬೇಡಿಕೆ ಸಲ್ಲಿಸಿದ ನಂತರ ನ್ಯಾಯಾಲಯ ಎಟಿಎಸ್ಗೆ ನಿರ್ದೇಶನ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.