ಮುಜಫ್ಫರ್ನಗರ (ಪಿಟಿಐ): ಕಳೆದ ವರ್ಷ ಮುಜಫ್ಫರ್ನಗರ ಕೋಮುಗಲಭೆ ಸಂದರ್ಭದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಮುಖ್ಯ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಶನಿವಾರ ಆರೋಪಪಟ್ಟಿ ಸಲ್ಲಿಸಿದೆ.
ಮುಜಫ್ಫರ್ನಗರ ಜಿಲ್ಲೆಯ ಫುಗನ ಗ್ರಾಮದ ವೇದಪಾಲ್ ಮತ್ತು ಇತರ ನಾಲ್ವರ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಸಚಿನ್, ಸನ್ನಿ, ಅಜಿತ್ ಮತ್ತು ಯೋಗೇಶ್ ಅವರು ತಲೆಮರೆಸಿಕೊಂಡಿದ್ದಾರೆ.
ಕೋಮುಗಲಭೆ ಸಂದರ್ಭದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಕುರಿತು ಆರು ಪ್ರಕರಣಗಳು ದಾಖಲಾಗಿದ್ದವು. ಆದರೆ, ಒಂದು ಪ್ರಕರಣದಲ್ಲಿ ದೂರುದಾರರು ಪ್ರತಿಕೂಲ ಹೇಳಿಕೆ ನೀಡಿದ ಕಾರಣ ಆ ಪ್ರಕರಣವನ್ನು ಪೊಲೀಸರು ಮುಕ್ತಾಯ ಮಾಡಿದ್ದಾರೆ.
ಸದ್ಯ ಐದು ಪ್ರಕರಣಗಳಲ್ಲಿ 22 ಆರೋಪಿಗಳ ವಿರುದ್ಧ ಎಸ್ಐಟಿ ತನಿಖೆ ನಡೆಸುತ್ತಿದ್ದು, ಇವರಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.