ADVERTISEMENT

ಮೇಕೆದಾಟು: ತಮಿಳುನಾಡು ಅರ್ಜಿ ವಜಾಕ್ಕೆ ಕೋರಿಕೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2015, 20:29 IST
Last Updated 5 ಅಕ್ಟೋಬರ್ 2015, 20:29 IST

ನವದೆಹಲಿ: ಮೇಕೆದಾಟು ವಿದ್ಯುತ್‌ ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸೋಮವಾರ ಕರ್ನಾಟಕ ಅರ್ಜಿ ಸಲ್ಲಿಸಿದೆ.

ಪ್ರಸ್ತಾವಿತ ಯೋಜನೆಗೆ ವಿವರವಾದ ಯೋಜನಾ ವರದಿ ಸಲ್ಲಿಸುವುದಕ್ಕಾಗಿ ಪ್ರಮುಖ ಕಂಪೆನಿಗಳಿಂದ ಇಂಗಿತ ಪತ್ರವನ್ನಷ್ಟೇ ಆಹ್ವಾನಿಸಲಾಗಿದೆ ಎಂದು ಅರ್ಜಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಕರ್ನಾಟಕದ ವ್ಯಾಪ್ತಿಯಲ್ಲಿರುವ ಪ್ರದೇಶದಲ್ಲಿ ಸಂಪೂರ್ಣವಾಗಿ ವಿದ್ಯುತ್‌ ಉತ್ಪಾದನೆಯ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ಹೇಳಿದೆ.  ತಮಿಳುನಾಡಿನ ಪಾಲಿನ ನೀರನ್ನು ಯೋಜನೆಗಾಗಿ ಬಳಸಿಕೊಳ್ಳುತ್ತಿಲ್ಲ. ಹಾಗಾಗಿ ಈ ಬಗ್ಗೆ ತಮಿಳುನಾಡು ಚಿಂತೆ ಮಾಡುವ ಅಗತ್ಯ ಇಲ್ಲ. ಆದ್ದರಿಂದ ತಮಿಳನಾಡಿನ ಅರ್ಜಿಯನ್ನು ವಜಾ ಮಾಡಬೇಕು ಎಂದು ಕರ್ನಾಟಕ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.