ADVERTISEMENT

ಮೇವು ಹಗರಣದ ನಾಲ್ಕನೇ ಪ್ರಕರಣ: ಲಾಲು ಪ್ರಸಾದ್‌ ದೋಷಿ, ಜಗನ್ನಾಥ್‌ ಮಿಶ್ರಾ ಖುಲಾಸೆ

ಪಿಟಿಐ
Published 19 ಮಾರ್ಚ್ 2018, 9:35 IST
Last Updated 19 ಮಾರ್ಚ್ 2018, 9:35 IST
ಮೇವು ಹಗರಣದ ನಾಲ್ಕನೇ ಪ್ರಕರಣ: ಲಾಲು ಪ್ರಸಾದ್‌ ದೋಷಿ, ಜಗನ್ನಾಥ್‌ ಮಿಶ್ರಾ ಖುಲಾಸೆ
ಮೇವು ಹಗರಣದ ನಾಲ್ಕನೇ ಪ್ರಕರಣ: ಲಾಲು ಪ್ರಸಾದ್‌ ದೋಷಿ, ಜಗನ್ನಾಥ್‌ ಮಿಶ್ರಾ ಖುಲಾಸೆ   

ರಾಂಚಿ: ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಪ್ರಕರಣದಲ್ಲೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ತಪ್ಪಿತಸ್ಥ ಎಂದು ಸೋಮವಾರ ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿದೆ.

ಸಿಬಿಐ ನ್ಯಾಯಾಲಯ ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲೂ ತಪ್ಪಿತಸ್ಥ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ನೀಡಿತ್ತು. ಇದೀಗ ನಾಲ್ಕನೇ  ನಾಲ್ಕನೇ ಪ್ರಕರಣದಲ್ಲೂ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಿಲ್ಲ.

ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್‌ ಮಿಶ್ರಾ ಅವರನ್ನು ನಾಲ್ಕನೇ  ಪ್ರಕರಣದಲ್ಲಿ ಖುಲಾಸೆಗೊಳಿಸಿದೆ.

ADVERTISEMENT

ದುಮ್ಕಾ ಖಜಾನೆಯಲ್ಲಿ ₹3.13 ಕೋಟಿ ಮೊತ್ತದ ವಂಚನೆ ಪ್ರಕರಣದ ಸಂಬಂಧ ಇಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.