ರಾಯ್ಬರೇಲಿ(ಪಿಟಿಐ): ಎರಡು ವರ್ಷ ಅಧಿಕಾರ ಪೂರ್ಣಗೊಳಿಸಿ ‘ವಿಕಾಸ ಪರ್ವ’ದ ಸಂಭ್ರಮದಲ್ಲಿರುವ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ‘ಮೋದಿ ಅವರು ದೇಶದ ಪ್ರಧಾನಿ ಎಂಬುದನ್ನು ಮರೆತು ಒಬ್ಬ ಸಾಮ್ರಾಟನಂತೆ ವರ್ತಿಸುತ್ತಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ತರಹದ ವರ್ತನೆಯವನ್ನು ಎಲ್ಲಿಯೂ ನೋಡಿರಲಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರಿಂದ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಾಮ್ರಾಟರಂತೆ ಸರ್ವಾಧಿಕಾರಿ ಧೋರಣೆಯ ವರ್ತನೆ ಮಾಡುತ್ತಿದ್ದಾರೆ. ದೇಶದಲ್ಲಿ ತೀವ್ರ ಬಡತನವಿದೆ. ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಠದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಎರಡು ವರ್ಷಗಳ ಸಾಧನೆಯ ಸಂಭ್ರಮಾಚರಣೆ ಮಾಡುತ್ತಿರುವುದು ಸರಿಯಲ್ಲ ಎಂದು ಸೋನಿಯಾ ಎನ್ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.