ಇಂಫಾಲ, ಮಣಿಪುರ (ಪಿಟಿಐ): ಸೇನಾಪಡೆಗೆ ವಿಶೇಷಾಧಿಕಾರ ನೀಡಿರುವ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 13 ವರ್ಷಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾನವ ಹಕ್ಕು ಕಾರ್ಯಕರ್ತೆ ಇರೋಮ್ ಶರ್ಮಿಳಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಆಸಕ್ತಿ ವ್ಯಕ್ತಪಡಿಸಿದ್ದಾರೆ.
‘ಪ್ರಧಾನಿಯವರನ್ನು ಭೇಟಿಯಾಗಿ, 1980ರಲ್ಲಿ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತಂದ ನಂತರ ಉಂಟಾಗಿರುವ ಪರಿಣಾಮ ಹಾಗೂ ಇಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಗಮನಸೆಳೆಯಲು ಪ್ರಯತ್ನಿಸುವೆ. ಈ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸುತ್ತೇನೆ’ ಎಂದು ಅವರು ಮಂಗಳವಾರ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.