ಬೆಂಗಳೂರು: ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಲು ರಾಜ್ಯ ಕಾಂಗ್ರೆಸ್ ಬೆಂಗಳೂರಿನಲ್ಲಿ ಸರಣಿ ಮಾಧ್ಯಮ
ಗೋಷ್ಠಿಗಳನ್ನು ಹಮ್ಮಿಕೊಂಡಿದೆ.
ಎನ್ಡಿಎ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿರುವ ಸುಳ್ಳುಗಳು, ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು, ದೇಶದ ಆರ್ಥಿಕ ಸ್ಥಿತಿ, ನಿರುದ್ಯೋಗ ಸಮಸ್ಯೆ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್ ಮುಂದಾಗಿದೆ.
ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಅನಿಲ್ ಶಾಸ್ತ್ರಿ, ಪೃಥ್ವಿರಾಜ್ ಚಾವ್ಹಾಣ್, ಆನಂದ್ ಶರ್ಮಾ ಅವರು ಇದೇ 26ರಿಂದ ಬೆಂಗಳೂರಿನಲ್ಲಿ ಮತ್ತು ರಮೇಶ್ ಚಿನ್ನಿತಾಲ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.