ADVERTISEMENT

ರಾಜ್ಯ ಸಚಿವರ ಜತೆ ಜೇಟ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2014, 19:30 IST
Last Updated 25 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ): ಮುಂಬರುವ ಬಜೆಟ್‌ಗೆ ಸಂಬಂಧಿಸಿದಂತೆ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಎಲ್ಲಾ ರಾಜ್ಯಗಳ ಹಣಕಾಸು ಸಚಿವರೊಂದಿಗೆ ಶುಕ್ರವಾರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಸಿಎಸ್‌ಟಿ ಮತ್ತು ಸರಕು ಹಾಗೂ ಸೇವಾ ತೆರಿಗೆಗಳಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಅವರು ಚರ್ಚಿಸಲಿದ್ದಾರೆ.

ಹಣಕಾಸು ಸಚಿವ­ರೊಂದಿಗಿನ ಸಭೆಯ ಬಳಿಕ ಕೈಗಾರಿಕೆ ಮತ್ತು ವ್ಯಾಪಾರ ಒಕ್ಕೂಟಗಳು ಸೇರಿದಂತೆ ವಿವಿಧ ಹಿತಾಸಕ್ತ ಸಂಘಟನೆಗಳ ಜತೆ ಅವರು ವಾಡಿಕೆಯಂತೆ ಬಜೆಟ್‌ಪೂರ್ವ ಸಮಾಲೋಚನೆ  ಪ್ರಾರಂಭಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.