ADVERTISEMENT

ರಾಮೇಶ್ವರದಲ್ಲಿ ನಾಳೆ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2015, 19:30 IST
Last Updated 28 ಜುಲೈ 2015, 19:30 IST

ನವದೆಹಲಿ (ಪಿಟಿಐ): ಶಿಲ್ಲಾಂಗ್‌ನಲ್ಲಿ ಸೋಮವಾರ ನಿಧನರಾದ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್‌ ಕಲಾಂ ಅಂತ್ಯಕ್ರಿಯೆ ಅವರ ಜನ್ಮಸ್ಥಳವಾದ ತಮಿಳುನಾಡಿನ ರಾಮೇಶ್ವರದಲ್ಲಿ  ಜುಲೈ 30ರಂದು (ಗುರುವಾರ) ನೆರವೇರಲಿದೆ.

‘ಅಂದು ಬೆಳಿಗ್ಗೆ 11 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ  ಅಂತ್ಯಕ್ರಿಯೆ ನಡೆಯಲಿದೆ’ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಕಂಬನಿಯ ಮಹಾಪೂರ:  ಕಲಾಂ ನಿಧನಕ್ಕೆ ಇಡೀ ದೇಶ ಕಂಬನಿ ಮಿಡಿದಿದೆ.

ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ ಮತ್ತಿತರ ಗಣ್ಯರು  ಅಂತಿಮ ನಮನ ಸಲ್ಲಿಸಿದರು.

ಕಲಾಪ ಮುಂದಕ್ಕೆ: ಸಂಸತ್‌ನ ಉಭಯ ಸದನಗಳಲ್ಲಿಯೂ ಕಲಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.