ಫತೇಪುರ್, ಉತ್ತರಪ್ರದೇಶ (ಪಿಟಿಐ): ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕಾಗೋಷ್ಠಿ ನಡೆಸಿದ ಆರೋಪದ ಮೇಲೆ ಬಾಬಾ ರಾಮ್ದೇವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ‘ಯೋಗ ದೀಕ್ಷೆ’ ಕಾರ್ಯಕ್ರಮದ ಬಳಿಕ ಯೋಗ ಕೇಂದ್ರದ ಸಂಯೋಜಕರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಇದಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆದಿರಲಿಲ್ಲ ಎಂದು ಉಪವಿಭಾಗಾಧಿಕಾರಿ ವಿವೇಕ್ ಶ್ರೀವಾತ್ಸವ್ ತಿಳಿಸಿದರು. ಈ ವಿಚಾರ ಚುನಾವಣಾ ಆಯೋಗದ ಗಮನಕ್ಕೂ ತರಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.