ಮುಂಬೈ: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ನೇಮಕಾತಿಯಲ್ಲಿನ ಅವ್ಯವಸ್ಥೆ ಪ್ರಶ್ನಿಸಿ ವಿದ್ಯಾರ್ಥಿಗಳು ರೈಲು–ರುಕೋ ಪ್ರತಿಭಟನೆ ಕೈಗೊಂಡಿದ್ದು, ರೈಲು ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಾತುಂಗ ಹಾಗೂ ದಾದರ್ ನಡುವಿನ ರೈಲ್ವೆ ಹಳಿ ಮೇಲೆ ಪ್ರತಿಭಟನೆ ಕೈಗೊಂಡಿರುವ ಸುಮಾರು 500 ವಿದ್ಯಾರ್ಥಿಗಳು ರೈಲ್ವೆ ಇಲಾಖೆಯ ಉದ್ಯೋಗ ನೇಮಕಾತಿಯ ಬೇಡಿಕೆ ಇಟ್ಟಿದ್ದಾರೆ.
ಪ್ರತಿಭಟನೆಯಿಂದ ದಾದರ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ನಡುವಿನ ರೈಲು ಸಂಚಾರಕ್ಕೆ ತೊಂದರೆಯಾಗಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.