ADVERTISEMENT

‘ರೈಸಿಂಗ್ ಕಾಶ್ಮೀರ್’ ಸಂಪಾದಕ ಶುಜಾತ್ ಬುಖಾರಿ ಮೇಲೆ ಗುಂಡಿನ ದಾಳಿ

ಏಜೆನ್ಸೀಸ್
Published 14 ಜೂನ್ 2018, 14:29 IST
Last Updated 14 ಜೂನ್ 2018, 14:29 IST
ಶುಜಾತ್ ಬುಖಾರಿ
ಶುಜಾತ್ ಬುಖಾರಿ   

ಶ್ರೀನಗರ: ‘ರೈಸಿಂಗ್ ಕಾಶ್ಮೀರ್‌’ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮೇಲೆ ಭಯೋತ್ಪಾದಕರು ಗುರುವಾರ ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿರುವ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

ಶ್ರೀನಗರದ ಪ್ರೆಸ್ ಕಾಲೊನಿಯಲ್ಲಿ ಶುಜಾತ್ ಬುಖಾರಿ ಅವರು ಇದ್ದ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ಮಳೆಗರೆದಿದ್ದಾರೆ.

ಕಾರು ಚಾಲಕ ಮತ್ತು ಖಾಸಗಿ ಭದ್ರತಾ ಸಿಬ್ಬಂದಿ ಸಹ ಈ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಮೂವರೂ ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT

18 ವರ್ಷಗಳ ಹಿಂದೆ (2000ನೇ ಇಸವಿ) ಶುಜಾತ್ ಬುಖಾರಿ ಅವರ ಮೇಲೆ ದಾಳಿ ನಡೆದಿತ್ತು. ನಂತರ ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.